Thursday 22 October 2015

ಪಡೀಲ್ ನಲ್ಲಿ ನಡೆದ ರೇವ್ ಪಾರ್ಟಿ ಮತ್ತು ಅದರ ಮೇಲಿನ ದಾಳಿ.. ಒಂದು ವಿಶ್ಲೇಷಣೆ


ಇವತ್ತು ಕನ್ನಡ ನ್ಯೂಸ್ ಚಾನಲ್ ನೋಡೋ ಹಾಗೇ ಇಲ್ಲ ನಿನ್ನೆಯಿಂದ ರೆಸಾರ್ಟ್ ದಾಳಿ ಅನ್ನೋ ಹೊಸ ಚ್ಯೂಯಿಂಗ್ ಗಮ್ ಸಿಕ್ಕಿದೆ ಅದರ ಸಿಹಿರಸ ಮುಗಿಯೋವರೆಗೆ ಜಗೀತಾನೆ ಇರ್ತಾರೆ...(ಈ ನ್ಯೂಸ್ ಚಾನಲ್ ನವರ ವಿಶೇಷತೆ ಏನು ಅಂದ್ರೆ ತಮ್ಮ ಅನುಭವಕ್ಕೆ ಸಿಹಿ ಹೋಗಿದೆ ಅಂತ ಗೊತ್ತಾದ್ರೂ ನೋಡೋರು ಥೂ ಉಗೀರ್ರೀ ಅದನ್ನ ಅನ್ನೋವರೆಗೆ ಜಗೀತಾನೆ ಇರ್ತಾರೆ)
ಇನ್ನು ಈ ಘಟನೆಯ ಕುರಿತು ...
ಮೊದಲಾಗಿ ಎಲ್ಲಾರೂ ಹೇಳುತ್ತಿರುವುದು... ಹೆಣ್ಣು ಮಕ್ಕಳಿಗೆ ಹೊಡೆಯೋದು ನಮ್ಮ ಸಂಸ್ಕೃತೀ ನಾ... ಹೆಣ್ಣನ್ನು ಪೂಜಿಸೋ ದೇಶ ನಮ್ಮದು ಅಂತ... ಖಂಡಿತಾ ಒಪ್ಪೋಣ ಹೆಣ್ಣನ್ನು ಪೂಜಿಸೋ ದೇಶ ನಮ್ಮದು... ಹಾಗಂತ ಸೀತೆ, ದ್ರೌಪದಿ, ತಾರ ಇಂತಹ ಹೆಣ್ಣನ್ನು ಪೂಜಿಸುತ್ತೇವೆಯೇ ಹೊರತು ಪೂತನಿ, ಶೂರ್ಪನಖಿ ಇಂತವರನ್ನು ಪೂಜಿಸೋಲ್ಲ.. ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಕೂಡ ಶೂರ್ಪನಖಿಯನ್ನು ದಂಡಿಸುವುದೇ ಸರಿ ಎಂದ. ಇದರ ಅರ್ಥ ವ್ಯಕ್ತಿಗೆ ಪೂಜೆ ಅಲ್ಲ ಅದು ವ್ಯಕ್ತಿತ್ವಕ್ಕೆ ಪೂಜೆ ಅನ್ನೋದು. ಸಾಮ ದಾನ ಭೇದ ದಂಡ ಇವೆಲ್ಲವನ್ನೂ ಉಪಯೋಗಿಸುವಂತೆ ನಮ್ಮ ಧರ್ಮ ಹೇಳಿಕೊಟ್ಟಿದೆ... ಬಹುಶ ಮಾಧ್ಯಮದವರು ತೋರಿಸದೇ ಇರುವಂತಾ ವಿಷಯ ಆಸುಪಾಸಿನ ಜನರ ಅಭಿಪ್ರಾಯ... ನಾನು ಪೇಪರಿನಲ್ಲಿ ಓದಿದಂತೆ ಹತ್ತಿರದ ಜನ ಪೋಲೀಸರಲ್ಲಿ ಈ ರೇವ್ ಪಾರ್ಟಿಗಳ ಬಗ್ಗೆ ತಿಳಿಸಿದ್ದಾರೆ ಆದರೂ ಸಕಾಲದಲ್ಲಿ ಇದರ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ... ಪೋಲೀಸರೇ ಕ್ರಮ ಕೈಗೊಂಡಿದ್ದರೆ ಇಂತಾ ಸಂಘಟನೆಗಳು ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದರೇ...??
ಇಲ್ಲಿ ನಡೆದದ್ದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ... ಆದರೂ ಮಾಧ್ಯಮದವರ ಪ್ರಶ್ನೆ ಹೆಣ್ಣು ಮಕ್ಕಳನ್ನು ಅಸಭ್ಯವಾಗಿ ನಡೆಸಿಕೊಂಡರು ಅಂತಾ ನಾನು ಈ ದೃಶ್ಯಗಳನ್ನು ನೋಡಿದಾಗ ನನಗೆ ಅನ್ನಿಸಿದ್ದು... ಅವರನ್ನ ಮಾಧ್ಯಮಕ್ಕೆ ತೋರಿಸುವಾಗ ಆ ಹುಡುಗಿಯರ ಕೊಸರಾಟದಿಂದಾಗಿ ಅಸಭ್ಯವಾಗಿ ಕಂಡಿದೆ ಅದಕ್ಕೆ ಕಾರಣ ಅವರು ಹಾಕಿಕೊಂಡಿದ್ದ ಬಟ್ಟೆ ಬಹುಶ ಇದೇ ಹೆಣ್ಣು ಮಕ್ಕಳು ಚೂಡಿದಾರ್ ಹಾಕಿದ್ದರೆ ಇದೇ ರೀತಿಯ ಎಳೆದಾಟ ಅಸಭ್ಯವಾಗಿ ಕಾಣುತ್ತಿರಲಿಲ್ಲ.... ವಿಚಿತ್ರ ಎಂದರೆ ಯಾವ ಅನೈತಿಕ ಚಟುವಟಿಕೆಯನ್ನು ಇವರು ಮಾಡುತ್ತಿದ್ದರೋ ಅದು ಯಾರಿಗೂ ಅಸಭ್ಯವಾಗಿ ಕಾಣುತ್ತಿಲ್ಲ ಅಂದರೆ ಕ್ರಿಯೆ ಅಸಹ್ಯಕರವಾಗಿದ್ದರೂ ಅದು ಅಸಭ್ಯವಾಗಿ ಕಾಣದೆ ಪ್ರತಿಕ್ರಿಯೆ ಮಾತ್ರ ಅಸಹ್ಯಕರವಾಗಿ ಕಂಡಿದೆ.
ಇನ್ನು ಇಲ್ಲಿನ ಕ್ರಿಯೆಯ ಬಗ್ಗೆ ಅಂದರೆ ನಾವೇನು ರೇವ್ ಪಾರ್ಟಿ ಅನ್ನುತ್ತಿದ್ದೇವೋ ಅದರ ಕುರಿತು ನಮ್ಮ ಸಂಸ್ಕೃತಿಗೆ ಹೇಳಿಸಿದಂತಾದ್ದು ಅಲ್ಲ ಆದರೆ ಅಲ್ಲಿನವರು ಹೇಳುತ್ತಿರುವುದು ಇದು ಬರ್ತ್ ಡೇ ಪಾರ್ಟಿ ಎಂದು... ಬಹುಶ ಬರ್ತ್ ಡೇ ಪಾರ್ಟಿಗೆ ಬೆಡ್ ರೂಮ್ ಗಳ ಅವಶ್ಯಕತೆ ಏನು ಅನ್ನುವುದು ನನಗಂತೂ ತಿಳಿದಿಲ್ಲ...ಇಂತಹಾ ಬರ್ತ್ ಡೇ ಪಾರ್ಟಿ ನಮಗೆ ಬೇಕಾ...?
ಇನ್ನು ಮಾಧ್ಯಮದವರ ಕುರಿತು ಮೊದಲಾಗಿ ತಮಗೆ ಸುದ್ದಿ ಸಿಕ್ಕ ಕೂಡಲೇ ಪೋಲೀಸರಿಗೆ ತಿಳಿಸದೆ ತಮ್ಮ ಟಿ.ಆರ್.ಪಿ ಯ ಕುರಿತು ಯೋಚಿಸಿ ಪದೇ ಪದೇ ಇದನ್ನೇ ತೋರಿಸುತ್ತಿರುವುದು. ಇಂತಹಾ ವಿಷಯವನ್ನು ಮತ್ತಷ್ಟು ದೊಡ್ಡದು ಮಾಡುತ್ತಿರುವ ಕಾರಣ ಈ ದಾಳಿ ನಡೆಸಿದವರು ಹಿಂದು ಸಂಘಟನೆಗಳು ಅನ್ನುವುದು, ಇನ್ಯಾವುದೋ ಕೋಮಿನವರು ಮಾಡಿದಿದ್ದಲ್ಲಿ ಒಂದು ಬಾರಿ ಬ್ರೇಕಿಂಗ್ ನ್ಯೂಸ್ ಅಂತ ಹಾಕಿ ಸುಮ್ಮನೆ ಇದ್ದು ಬಿಡುತ್ತಿದ್ದರು.
ಇಷ್ಟಾಗಿಯೂ ಹುಡುಗಿಯರ ಮೇಲೆ ಕೈ ಎತ್ತಿದ್ದು ಸರಿಯಲ್ಲ ಅಂತಾನೆ ಹೇಳಬಹುದು ಯಾಕೆಂದರೆ ಪೆಟ್ಟಿಗೆ ಬಗ್ಗೋ ಹುಡುಗ ಹುಡುಗಿಯರಲ್ಲ ಇವರು. ನನಗನ್ನುತ್ತೆ ಇಂತಾವರಿಗೆ ಪೆಟ್ಟು ಕೊಟ್ಟು ತಮ್ಮ ಸಂಘಟನೆಯ ಹೆಸರು ಹಾಳು ಮಾಡಿಕೊಳ್ಳುವುದಕ್ಕಿಂತ ಮಾರ್ಮಿಕ ಪೆಟ್ಟು ಕೊಡಬೇಕಿತ್ತು... ಇಂತಾಹವರನ್ನೆಲ್ಲ ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರು ಮತ್ತು ಮಾಧ್ಯಮದ ಮುಂದೆ ಕೂರಿಸಿ ಪ್ರಶ್ನೆಗಳ ಸುರಿಮಳೆ ಮಾಡಿ ಆದರ ಮೂಲಕ ಅವರ ನಿಜ ಬಣ್ಣವನ್ನು ಬಯಲು ಮಾಡಬೇಕಿತ್ತು.ಅಲ್ಲಿ ನಡೆಯುತ್ತಿದ್ದುದು ಏನು ಅನ್ನುವುದನ್ನು ಜಗತ್ತಿಗೆ ಸಾರಿ ಹೇಳಬೇಕಿತ್ತು.ಆವಾಗ ಸಂಘಟನೆಗೂ ಒಳ್ಳೆ ಹೆಸರು ಬರುತ್ತಿತ್ತು.
ಇಲ್ಲಿ ಮತ್ತೂ ಒಂದು ದೊಡ್ಡ ತಪ್ಪು ಪಾಲಕರದ್ದು , ತಮ್ಮ ಮಕ್ಕಳ ಬಗ್ಗೆ ಒಂದಷ್ಟು ಗಮನ ಕೊಡೋದು ಅವರ ಕರ್ತವ್ಯ ಅಲ್ವಾ... ಮಕ್ಕಳಿಗೆ ದುಡಿಯೋ ಮಾರ್ಗವನ್ನಷ್ಟೇ ತೋರಿಸಿ, ನೀವು ದುಡಿದ ಹಣವನ್ನು ಬೇಕಾಬಿಟ್ಟಿ ಅವರಮೇಲೆ ಸುರಿಯಬೇಡಿ...ದುಡಿದು ತಿನ್ನುವಂತೆ ಮಾಡುವುದೇ ನಿಜವಾದ ಪಾಲಕರ ಲಕ್ಷಣ.ಮಕ್ಕಳ ಖರ್ಚು ಹದ್ದು ಮೀರಿದರೆ ಅವರು ಎಡವುತ್ತಿದ್ದಾರೆ ಎಂದು ತಾನೆ ಅರ್ಥ. ಎಲ್ಲರೂ ನಮ್ಮ ಸಂಸ್ಕೃತಿಯ ರಕ್ಷಣೆಗೆ ತೊಡಗಿದರೇ ಇಂತಹಾ ಘಟನೆಗಳು ಖಂಡಿತಾ ನಡೆಯಲಾರವು. ಮುಂದೆ ಇಂತಹಾ ಪಾರ್ಟಿಗಳು ನಡೆಯದೇ ಇರಲಿ ಇಂತಹಾ ದಾಳಿಗಳು ಕೂಡ ನಡೆಯದೇ ಇರಲಿ..

No comments:

Post a Comment